ಜೋಧ್ಪುರ (ರಾಜಸ್ಥಾನ): ಇಂದಿನ ಆಧುನಿಕ ಜಗತ್ತಿನಲ್ಲಿ ಮೊಬೈಲ್ ಫೋನ್ ಪ್ರತಿಯೊಬ್ಬ ಮಾನವನ ಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ, ಇದೇ ಮೊಬೈಲ್ ಫೋನ್ ಸದ್ಯ ಜೀವಕ್ಕೆ ಕಂಟಕವಾಗುತ್ತಿರುವ ಸರಣಿ ಘಟನೆಗಳು ಆತಂಕ ಮೂಡಿಸುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ, ರಾಜಸ್ಥಾನದಲ್ಲಿ ವ್ಯಾಪಾರಿಯೊಬ್ಬರ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್ ಫೋನ್ ದಿಢೀರನೆ ಸ್ಫೋಟಗೊಂಡಿರುವ ಭೀಕರ ಘಟನೆ ಇತ್ತೀಚೆಗೆ ನಡೆದಿದೆ. ಜೇಬಿನಿಂದ ಬಂದ ಹೊಗೆ, ಕ್ಷಣಾರ್ಧದಲ್ಲಿ ಸ್ಫೋಟ: ರಾಜಸ್ಥಾನದ ಜೋಧ್ಪುರದ ಮಂಡೋರ್ ಕೃಷಿ ಮಾರುಕಟ್ಟೆಯಲ್ಲಿ ವ್ಯಾಪಾರಿಯೊಬ್ಬರು ಎಂದಿನಂತೆ ತಮ್ಮ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ…
ತುಮಕೂರು: ಪತಿಯ ನಿರಂತರ ಮಾನಸಿಕ ಕಿರುಕುಳ ಹಾಗೂ ಹೆತ್ತ ಮಗನನ್ನು ನೋಡಲು ಬಿಡದ ಕ್ರೌರ್ಯಕ್ಕೆ ಬೇಸತ್ತು ಇಬ್ಬರು ಮಕ್ಕಳ ತಾಯಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಕುಮನಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಕುಂಕುಮನಹಳ್ಳಿ ಗ್ರಾಮದ ನಿವಾಸಿ ಕಲಾವತಿ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ ಮಹಿಳೆಯಾಗಿದ್ದಾರೆ. ಈ ಭೀಕರ ಘಟನೆ ಬೆಳಕಿಗೆ ಬಂದಿದೆ. ಮೃತ ಕಲಾವತಿ ಅವರಿಗೆ ಕಳೆದ 2020ರಲ್ಲಿ ನೆಲಮಂಗಲ ಮೂಲದ ಹನುಮಂತರಾಜು ಎಂಬುವವರ ಜೊತೆ ಶಾಸ್ತ್ರೋಕ್ತವಾಗಿ ವಿವಾಹವಾಗಿತ್ತು….