ಸಿದ್ಧಾಪುರ: ಮಾದಕ ವಸ್ತುಗಳ ಬಳಕೆ, ಅಪ್ರಾಪ್ತ ವಯಸ್ಸಿನ ವಾಹನ ಚಾಲನೆ ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸಿದ್ಧಾಪುರ ಪೊಲೀಸ್ ಠಾಣೆಯ ವತಿಯಿಂದ ಮಾಲ್ದಾರೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಗೆ ಭೇಟಿ ನೀಡಿದ ಸಿದ್ಧಾಪುರ ಠಾಣೆಯ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾದಿ ತಪ್ಪದಂತೆ ಕಾನೂನಿನ ಚೌಕಟ್ಟನ್ನು ಅರಿಯುವುದು ಅತ್ಯಗತ್ಯ ಎಂದರು. ಮಾದಕ ವಸ್ತುಗಳ ಸೇವನೆಯಿಂದ ಆರೋಗ್ಯದ ಮೇಲಾಗುವ ಭೀಕರ…
ಚಳ್ಳಕೆರೆ: ನಗರದಲ್ಲಿ ದ್ವಿಚಕ್ರ ವಾಹನಗಳಲ್ಲಿ ಸೈಲೆನ್ಸರ್ಗಳನ್ನು ಮಾರ್ಪಾಡು ಮಾಡಿ, ಕರ್ಕಶ ಶಬ್ದದ ಮೂಲಕ ಸಾರ್ವಜನಿಕರಿಗೆ ಹಾಗೂ ಪಾದಚಾರಿಗಳಿಗೆ ಕಿರಿಕಿರಿ ಉಂಟುಮಾಡುತ್ತಿದ್ದ ಸವಾರರ ವಿರುದ್ಧ ಚಳ್ಳಕೆರೆ ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ನಗರದ ಪ್ರಮುಖ ರಸ್ತೆಗಳಲ್ಲಿ ಕರ್ಕಶ ಶಬ್ದ ಉಂಟುಮಾಡುತ್ತಾ ಸಾಗುತ್ತಿದ್ದ ದ್ವಿಚಕ್ರ ವಾಹನಗಳನ್ನು ತಡೆದು ನಿಲ್ಲಿಸಿದ ಪೊಲೀಸರು, ನಿಯಮ ಬಾಹಿರವಾಗಿ ಹೆಚ್ಚುವರಿಯಾಗಿ ಅಳವಡಿಸಿಕೊಂಡಿದ್ದ ಸೈಲೆನ್ಸರ್ಗಳನ್ನು ಸ್ಥಳದಲ್ಲೇ ಬಿಚ್ಚಿಸಿ ಜಪ್ತಿ ಮಾಡಿದ್ದಾರೆ. ನಿಯಮ ಉಲ್ಲಂಘಿಸಿದ ಸವಾರರಿಗೆ ಸ್ಥಳದಲ್ಲೇ ಭಾರಿ ದಂಡ ವಿಧಿಸಿ, ಮುಂದಿನ ದಿನಗಳಲ್ಲಿ ಇಂತಹ…