ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತವರು ಮನೆಯಲ್ಲಿದ್ದ ಪತ್ನಿಯನ್ನು ವಾಪಸ್ ಕರೆತರಲು ಹೋದ ಪತಿಯ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. ಬಾಬುಸಾಬ್ ಜಮಾದಾರ್ (35) ಕೊಲೆಯಾದ ದುರ್ದೈವಿ ಪತಿ. ಗಲಾಟೆ ವೇಳೆ ತಡೆಯಲು ಬಂದ ಇವರ ಸ್ನೇಹಿತ ಅಪ್ಪಾಲಾಲ ಮಕಾಸಿ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಬಾಬುಸಾಬ್ ಜಮಾದಾರ್ ಐದು…
ದೇಶವನ್ನೇ ಬೆಚ್ಚಿಬೀಳಿಸಿದ್ದ ಆರು ಜನರ ಭೀಕರ ಹತ್ಯಾಕಾಂಡ ಪ್ರಕರಣದಲ್ಲಿ ಈಗ ಮತ್ತೊಂದು ಆಘಾತಕಾರಿ ಹಾಗೂ ರೋಮಾಂಚನಕಾರಿ ಸತ್ಯ ಬಯಲಾಗಿದೆ. ಪ್ರಕರಣದ ಮುಖ್ಯ ಆರೋಪಿ ರಾಜಕುಮಾರ್, ತನ್ನ ವಿರುದ್ಧ ದಾಖಲಾಗಿದ್ದ ಪೋಕ್ಸೋ (POCSO) ಪ್ರಕರಣದಿಂದ ಪಾರಾಗಲು ಬರೋಬ್ಬರಿ 20 ಲಕ್ಷ ರೂಪಾಯಿ ಲಂಚದ ಡೀಲ್ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿ ರಾಜಕುಮಾರ್ನಿಂದ ಭಾರಿ ಪ್ರಮಾಣದ ಹಣ ಕೈಬದಲಾದ ಹಿನ್ನೆಲೆಯಲ್ಲಿ, ಅಂದಿನ ತನಿಖಾಧಿಕಾರಿಗಳು ಆತನಿಗೆ ಕಾನೂನಿನ ರಕ್ಷಣೆ ನೀಡಲು ಮುಂದಾಗಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಠಿಣವಾದ…