ಚಿಕ್ಕಬಳ್ಳಾಪುರ: ನ್ಯಾಯಾಲಯದಲ್ಲಿ ಸಿವಿಲ್ ವ್ಯಾಜ್ಯವೊಂದರ ತೀರ್ಪು ತನ್ನ ಪರವಾಗಿ ಬರಲೆಂದು ಮಹಿಳಾ ನ್ಯಾಯಾಧೀಶರ ಆಸನದ (ಚೇರ್) ಮೇಲೆಯೇ ಮಾಟಮಂತ್ರ ಮಾಡಿದ್ದ ವೃದ್ಧೆಯೊಬ್ಬರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ವಲಸಣ್ಣ ಬೀದಿಯ ನಿವಾಸಿಯಾದ ಮಂಜುಳಾ (65) ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಬಳ್ಳಾಪುರ ನಗರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮಂಜುಳಾ ಎಂಬುವವರಿಗೆ ಸಂಬಂಧಿಸಿದ ಸಿವಿಲ್ ಪ್ರಕರಣವೊಂದರ ವಿಚಾರಣೆ ನಡೆಯುತ್ತಿತ್ತು. ಈ ವ್ಯಾಜ್ಯದಲ್ಲಿ ತಮಗೆ ಅನುಕೂಲಕರವಾಗಿ ತೀರ್ಪು ಬರಬೇಕೆಂಬ ದುರುದ್ದೇಶದಿಂದ, ಆರೋಪಿ ಮಹಿಳೆಯು…
ಮಂಗಳೂರು: ಚಲಿಸುತ್ತಿದ್ದ ಖಾಸಗಿ ಬಸ್ನಲ್ಲೇ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪದಡಿ ಬಸ್ ಕಂಡಕ್ಟರ್ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಜುಲೈ 10ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿವಾಸಿ ಇರ್ಫಾನ್ (32) ಎಂದು ಗುರುತಿಸಲಾಗಿದೆ. ಆರೋಪಿ ಇರ್ಫಾನ್ ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದನು. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಜುಲೈ 9ರಂದು ಸಂಜೆ ಸುಮಾರು 5 ಗಂಟೆಯ ವೇಳೆಗೆ ಬಸ್ನಲ್ಲಿ ಈ…