ರಾಯಚೂರು: ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಜಂಟಿ ಆಶ್ರಯದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರಿಗಾಗಿ ‘ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣ’ ಕಾರ್ಯಕ್ರಮವನ್ನು ನಗರದ ಮೈತ್ರಿ ಸಮುದಾಯ ಭವನದಲ್ಲಿ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ನಗರದ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರು, ಸಾಂಕ್ರಾಮಿಕ ರೋಗಗಳು ಹರಡುವ ವಿಧಾನ, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವ ಕುರಿತು ವಿವರವಾದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿ ಕರ್ತವ್ಯದ ನಡುವೆ ತಮ್ಮ…
ಬೀದರ್: ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಕುಂದು-ಕೊರತೆಗಳ ಕುರಿತು ಪ್ರಮುಖ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಐ.ಪಿ.ಎಸ್. ಅವರು, ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆ ಹಾಗೂ ಕುಂದು-ಕೊರತೆಗಳನ್ನು ಆಲಿಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ನೀಡಿದ ದೂರುಗಳು, ಮಾಹಿತಿ ಮತ್ತು ಅಮೂಲ್ಯ ಸಲಹೆಗಳನ್ನು ಅತ್ಯಂತ ಸಕಾರಾತ್ಮಕವಾಗಿ ಸ್ವೀಕರಿಸಲಾಯಿತು….