ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿಗಳ ನಡುವಿನ ವೈಷಮ್ಯ ವಿಕೋಪಕ್ಕೆ ಹೋಗಿದ್ದು, ತಮಿಳುನಾಡಿನಿಂದ ಸ್ನೇಹಿತರನ್ನು ಕರೆಸಿ ಹಲ್ಲೆ ಮಾಡಿಸಿದ ಆರೋಪದ ಮೇಲೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲ್ಲೆ ಮಾಡಲು ಬಂದು ಹಣ ಮತ್ತು ವಸ್ತುಗಳನ್ನು ಕಿತ್ತುಕೊಂಡಿದ್ದರಿಂದ ಆರೋಪಿಗಳ ಮೇಲೆ ಡಕಾಯಿತಿ ಪ್ರಕರಣ ದಾಖಲಾಗಿದೆ. ಅಭಿನೇಶ್, ಕಲೈ ವೆಂದನ್, ವಿಮಲ್ ರಾಜ್, ಕುಮಾರನ್, ಪ್ರೇಮ್ ಕುಮಾರ್ ಹಾಗೂ ನವೀನ್ ಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಲ್ಲಿ ಅಭಿನೇಶ್ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಮೆಕ್ಯಾನಿಕಲ್…