ಮೈಸೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಇಂದು ಅಬಕಾರಿ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸಂಚಲನ ಮೂಡಿಸಿದರು. ನಗರದ ಪ್ರಮುಖ ಬಡಾವಣೆಗಳು ಹಾಗೂ ಕೈಗಾರಿಕಾ ಪ್ರದೇಶಗಳ ಸುತ್ತಮುತ್ತಲಿರುವ ಅನುಮಾನಾಸ್ಪದ ಸ್ಥಳಗಳ ಮೇಲೆ ಈ ಕಾರ್ಯಾಚರಣೆ ನಡೆಯಿತು. ನಗರದ ಬನ್ನಿಮಂಟಪ ಬಡಾವಣೆ, ರಾಡಿಕೋ ಡಿಸ್ಟಿಲರಿ ಸುತ್ತಮುತ್ತಲಿನ ಪ್ರದೇಶಗಳು, ಎನ್.ಆರ್. ಮೊಹಲ್ಲಾ ಹಾಗೂ ಸಿ.ವಿ. ಮೊಹಲ್ಲಾಗಳಲ್ಲಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಪ್ರಮುಖ ಗೋಡೌನ್ಗಳು ಹಾಗೂ ಗುಜರಿ ಅಂಗಡಿಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು….
ಮೈಸೂರು: ಇಲ್ಲಿನ ವಿನಾಯಕನಗರದ ಮಾತೃಮಂಡಳಿ ವೃತ್ತದ ಬಳಿ ಇರುವ ಸಬ್ವೇನಲ್ಲಿ ಅನಾಥ ವ್ಯಕ್ತಿಯೊಬ್ಬರ ಶವ ಇಂದು ಪತ್ತೆಯಾಗಿದೆ. ಅತಿಯಾದ ಮದ್ಯಪಾನ ಸೇವನೆಯಿಂದಾಗಿ ವ್ಯಕ್ತಿ ಮೃತಪಟ್ಟಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಮೃತ ವ್ಯಕ್ತಿಗೆ ಸರಿಸುಮಾರು 30 ರಿಂದ 35 ವರ್ಷ ವಯಸ್ಸಿರಬಹುದೆಂದು ಅಂದಾಜಿಸಲಾಗಿದೆ. ಸಬ್ವೇನಲ್ಲಿ ವ್ಯಕ್ತಿ ಅಚೇತನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. …