ವೆಲ್ಲೂರು: ಸಿನಿಮಾ ಸ್ಟೈಲ್ನಲ್ಲಿ ತನ್ನ ಪ್ರಿಯಕರನನ್ನು ಮೆಚ್ಚಿಸಲು ಹೋಗಿ, ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಸಮವಸ್ತ್ರ ಧರಿಸಿ ಸಾರ್ವಜನಿಕವಾಗಿ ಓಡಾಡುತ್ತಿದ್ದ ಖತರ್ನಾಕ್ ಮಹಿಳೆಯೊಬ್ಬಳು ತಮಿಳುನಾಡಿನ ವೆಲ್ಲೂರು ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಬಂಧಿತೆಯನ್ನು ಉಮಾಮಹೇಶ್ವರಿ (33) ಎಂದು ಗುರುತಿಸಲಾಗಿದೆ. ಈಕೆ ಈಗಾಗಲೇ ವಿವಾಹಿತೆಯಾಗಿದ್ದು, ಮೂವರು ಮಕ್ಕಳ ತಾಯಿಯಾಗಿದ್ದಾಳೆ. ಪತಿ ಕೃಷಿ ಕೆಲಸ ಮಾಡಿಕೊಂಡಿದ್ದರೂ, ಈಕೆಗೆ ಲಾರಿ ಚಾಲಕನೊಬ್ಬನ ಜೊತೆ ವಿವಾಹೇತರ ಸಂಬಂಧವಿತ್ತು ಎಂದು ತಿಳಿದುಬಂದಿದೆ. ಮಾಹಿತಿಯ ಪ್ರಕಾರ, ಉಮಾಮಹೇಶ್ವರಿಗೆ ಪೊಲೀಸ್ ಸಮವಸ್ತ್ರ ಧರಿಸಬೇಕೆಂಬ ಹಂಬಲ ಬಹಳ ದಿನಗಳಿಂದ…
ಬೆಂಗಳೂರು ಮಹಾನಗರದ ಘನತ್ಯಾಜ್ಯ ವಿಲೇವಾರಿ ಹೆಸರಿನಲ್ಲಿ ಬರೋಬ್ಬರಿ 39,000 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ಆರೋಪಕ್ಕೆ ರಾಜ್ಯ ಸರ್ಕಾರ ತಿರುಗೇಟು ನೀಡಿದೆ. “ನಿಮ್ಮ ಬಳಿ ಸೂಕ್ತ ಸಾಕ್ಷ್ಯಗಳಿದ್ದರೆ ಅದನ್ನು ಮೊದಲು ಜನರೆದುರು ಬಹಿರಂಗಪಡಿಸಿ” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “ರಾಜ್ಯಪಾಲರ ಬಳಿ ಹೋಗುವುದು ಎಲ್ಲದಕ್ಕೂ ಪರಿಹಾರವಲ್ಲ. ನಿಮ್ಮಲ್ಲಿರುವ ಸಾಕ್ಷ್ಯಗಳನ್ನು ಜನರಿಗೆ…