ಚಿಕ್ಕಬಳ್ಳಾಪುರ: ಗಂಡನ ಮನೆಯಲ್ಲಿ ಕಿರುಕುಳ ಮತ್ತು ತವರು ಮನೆಯಲ್ಲಿ ಅನುಭವಿಸಿದ ಅವಮಾನದಿಂದ ಬೇಸತ್ತು ಪ್ರತ್ಯೇಕವಾಗಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇಬ್ಬರು ಹೆಣ್ಣು ಮಕ್ಕಳ ತಾಯಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಾಲೂಕಿನ ಚೊಕ್ಕನಹಳ್ಳಿಯಲ್ಲಿ ನಡೆದಿದೆ. ಇನವಿಂಚನಹಳ್ಳಿ ಮೂಲದ ಚೈತ್ರಾ (28) ಮೃತ ದುರ್ದೈವಿ. ಘಟನಾ ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ವಿವರ: ಮೃತ ಚೈತ್ರಾಗೆ 14 ವರ್ಷಗಳ ಹಿಂದೆ ದೇವನಹಳ್ಳಿ ತಾಲೂಕಿನ ನಲಪ್ಪನಹಳ್ಳಿಯ ವ್ಯಕ್ತಿಯೊಂದಿಗೆ…
ಬೆಂಗಳೂರು: ಫ್ರಾನ್ಸ್ ಮೂಲದ ಜಾಗತಿಕ ಆಹಾರ ಮತ್ತು ಪೌಷ್ಟಿಕಾಂಶ ಕ್ಷೇತ್ರದ ದೈತ್ಯ ಸಂಸ್ಥೆಯಾದ ‘ಡ್ಯಾನೋನ್’ (Danone) ಪ್ರತಿನಿಧಿಗಳೊಂದಿಗೆ ರಾಜ್ಯ ಸರ್ಕಾರದ ಉನ್ನತ ಮಟ್ಟದ ನಿಯೋಗವು ಮಹತ್ವದ ಸಭೆ ನಡೆಸಿದ್ದು, ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಯ ಕುರಿತು ಸುದೀರ್ಘ ಚರ್ಚೆ ನಡೆಸಿದೆ. ಡೇರಿ, ಸಸ್ಯಾಧಾರಿತ ಉತ್ಪನ್ನಗಳು ಹಾಗೂ ವಿಶೇಷ ಪೌಷ್ಟಿಕಾಂಶ ವಲಯದಲ್ಲಿ ವಿಶ್ವದ ೧೨೦ಕ್ಕೂ ಹೆಚ್ಚು ದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಡ್ಯಾನೋನ್ ಸಂಸ್ಥೆಗೆ, ದಕ್ಷಿಣ ಭಾರತದಲ್ಲಿ ತನ್ನ ಮುಂದಿನ ಹಂತದ ಬೆಳವಣಿಗೆಗೆ ಕರ್ನಾಟಕವನ್ನು ಪ್ರಮುಖ ‘ಹಬ್’…