ಕೋಯಮತ್ತೂರು: ಪ್ರಯಾಣಿಕರಿಂದ ಕಿಕ್ಕಿರಿದು ತುಂಬಿದ್ದ ಖಾಸಗಿ ಬಸ್ಸೊಂದರಲ್ಲಿ ಯುವತಿಯೊಬ್ಬಳು ಚಾಲಕನ ಪಕ್ಕದ ಗೇರ್ ಬಾಕ್ಸ್ ಮೇಲೆ ಕುಳಿತು, ಆತನ ಗಮನ ತಪ್ಪಿಸುವಂತೆ ಅಸಭ್ಯವಾಗಿ ವರ್ತಿಸಿರುವ ಆಘಾತಕಾರಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನೂರಾರು ಪ್ರಯಾಣಿಕರ ಪ್ರಾಣದ ಜೊತೆ ಚೆಲ್ಲಾಟವಾಡಿದ ಚಾಲಕ ಹಾಗೂ ಯುವತಿಯ ಬೇಜವಾಬ್ದಾರಿತನಕ್ಕೆ ಸಾರ್ವಜನಿಕರು ಉಗಿದು ಉಪ್ಪಿನಕಾಯಿ ಹಾಕುತ್ತಿದ್ದಾರೆ. ತಮಿಳುನಾಡಿನ ಕೋಯಮತ್ತೂರಿನ ಶಿವಾನಂದ ಕಾಲೋನಿಯಿಂದ ರಾಮನಾಥಪುರಂ ಮಾರ್ಗವಾಗಿ ಚಲಿಸುವ ರೂಟ್ ನಂಬರ್ 5ರ…
ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ತೀರ್ಪು ಪ್ರಕಟಿಸುವಲ್ಲಿ ಆಗುತ್ತಿದ್ದ ದೀರ್ಘಾವಧಿಯ ವಿಳಂಬಕ್ಕೆ ಕಡಿವಾಣ ಹಾಕಲು ಭಾರತದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂಕೋರ್ಟ್ ಅತ್ಯಂತ ಮಹತ್ವದ ಹಾಗೂ ಐತಿಹಾಸಿಕ ಆದೇಶವೊಂದನ್ನು ಹೊರಡಿಸಿದೆ. ಇನ್ನು ಮುಂದೆ ಯಾವುದೇ ಪ್ರಕರಣದಲ್ಲಿ ವಾದ-ಪ್ರತಿವಾದ ಪೂರ್ಣಗೊಂಡು ಆದೇಶ ಕಾಯ್ದಿರಿಸಿದ ನಂತರ, ದೇಶದ ಎಲ್ಲಾ ಹೈಕೋರ್ಟ್ಗಳು ಗರಿಷ್ಠ 3 ತಿಂಗಳೊಳಗೆ ಅಂತಿಮ ತೀರ್ಪನ್ನು ಪ್ರಕಟಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಕಡಕ್ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ…