ಅಹ್ಮದಾಬಾದ್: ಗುಜರಾತ್ನ ಸೂರತ್ ನಗರದಲ್ಲಿ ಭೀಕರ ಹಾಗೂ ಅತ್ಯಂತ ನಿಗೂಢ ಘಟನೆಯೊಂದು ಬೆಳಕಿಗೆ ಬಂದಿದ್ದು, ಯಾವುದೇ ಮುನ್ಸೂಚನೆ ಇಲ್ಲದೆ ರಾತ್ರೋರಾತ್ರಿ ಬರೋಬ್ಬರಿ 100 ಬಡವರ ಆಶಯದ ಮನೆಗಳನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಲಾಗಿದೆ. ಆದರೆ, ಈ ಕಾರ್ಯಾಚರಣೆ ನಡೆಸಿದವರು ಯಾರು ಎಂಬುದು ಸದ್ಯಕ್ಕೆ ಯಾರಿಗೂ ತಿಳಿಯದ ರಹಸ್ಯವಾಗಿ ಪರಿಣಮಿಸಿದೆ. ಸೂರತ್ನ ಲಿಂಬಾಯತ್ ಪ್ರದೇಶದ ಮಹಾದೇವನಗರ-3 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ತಲೆಮಾರುಗಳಿಂದ ವಾಸಿಸುತ್ತಿದ್ದ ನೂರಾರು ಕುಟುಂಬಗಳು ಈಗ ಬೀದಿಗೆ ಬಿದ್ದಿವೆ. ಲಿಂಬಾಯತ್ನ ಈ ಕೊಳಗೇರಿ ಪ್ರದೇಶದಲ್ಲಿ…
ತುಮಕೂರು: ತುಮಕೂರಿನಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಹಾಗೂ ತುಮಕೂರು ಪೊಲೀಸರು ಭರ್ಜರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಪಾಕಿಸ್ತಾನ ಮೂಲದ ಉಗ್ರನೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಆರೋಪಿ, ದಾವಣಗೆರೆಯ ಜಮೀರ್ ಖಾನ್ ಎಂಬಾತನನ್ನು ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಯಶಸ್ವಿಯಾಗಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ದಾವಣಗೆರೆಯ ಬೀಡಿ ಲೇಔಟ್ ನಿವಾಸಿ ಜಮೀರ್ ಖಾನ್ ಎಂದು ಗುರುತಿಸಲಾಗಿದೆ. ಈತ ವಿವಿಧ ಸಾಮಾಜಿಕ ಜಾಲತಾಣಗಳ (Social Media) ಮೂಲಕ ಪಾಕಿಸ್ತಾನ ಮೂಲದ ಭಯೋತ್ಪಾದಕನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ ಎನ್ನಲಾಗಿದೆ….