ಕಣ್ಣೂರು: ಕೇರಳದ ಶಬರಿಮಲೆ, ಗುರುವಾಯೂರು, ತಳಿಪರಂಬ್ನ ರಾಜ ರಾಜೇಶ್ವರಿ ಹಾಗೂ ಪರಶಿನಿಕಡವು ಮುಂತಾದ ಪುಣ್ಯಕ್ಷೇತ್ರಗಳ ಸಾಲಿಗೆ ಇದೀಗ ಕೇರಳದ ಮತ್ತೊಂದು ಪವಿತ್ರ ಕ್ಷೇತ್ರ ‘ಕೊಟ್ಟಿಯೂರು’ ಸೇರ್ಪಡೆಯಾಗಿದೆ. ದೇವರ ಸ್ವಂತ ನಾಡಿನ ಪ್ರಕೃತಿಯ ಮಡಿಲಲ್ಲಿರುವ ಕಣ್ಣೂರು ಜಿಲ್ಲೆಯ ಕೊಟ್ಟಿಯೂರು ಶಿವ ಕ್ಷೇತ್ರದಲ್ಲಿ ವರ್ಷಕ್ಕೊಮ್ಮೆ ನಡೆಯುವ ೨೭ ದಿನಗಳ ವೈಶಾಖ ಮಹೋತ್ಸವವು ಕೊಡಗು ಸೇರಿದಂತೆ ಇಡೀ ಕರ್ನಾಟಕದಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಗಡಿ ದಾಟಿ ಭಕ್ತರ ದಂಡೇ ಹರಿದು ಬರುತ್ತಿದೆ. ಕೇರಳ ರಾಜ್ಯದ ಎರಡನೇ ಅತೀ ಶ್ರೀಮಂತ ದೇಗುಲ…
ಬೆಂಗಳೂರು: ದಿನಬಳಕೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗಾಲಾಗಿರುವ ಸಾರ್ವಜನಿಕರಿಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಗೃಹ ಬಳಕೆಯ ಎಲ್ಪಿಜಿ (Domestic LPG) ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 29 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ. ಕಳೆದ ಮೂರು ತಿಂಗಳ ಅಂತರದಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದ್ದು, ಮಧ್ಯಮ ಮತ್ತು ಬಡ ವರ್ಗದ ಕುಟುಂಬಗಳ ಮಾಸಿಕ ಬಜೆಟ್ ಮೇಲೆ ಭಾರಿ ಹೊರೆ ಬೀಳಲಿದೆ. ಸ್ಥಳೀಯ ತೆರಿಗೆ ಮತ್ತು ಸಾಗಾಣಿಕೆ ವೆಚ್ಚಗಳ…