ನವದೆಹಲಿ: ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ NEET-UG ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮಗಳನ್ನು ಖಂಡಿಸಿ ಭಾರತದ ಅತಿದೊಡ್ಡ ‘ಜೆನ್ ಝಿ’ (Gen Z) ಯುವ ಸಮೂಹದ ಪ್ರತಿಭಟನೆ ರಾಜಧಾನಿಯಲ್ಲಿ ಭುಗಿಲೆದ್ದಿದೆ. ಅಮೆರಿಕಾದಿಂದ ಭಾರತಕ್ಕೆ ಬಂದಿಳಿದಿರುವ ಇಂಟರ್ನೆಟ್ ಸೆನ್ಸೇಷನ್, ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ಧೀಪ್ಕೇ ನೇತೃತ್ವದಲ್ಲಿ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಧರಣಿ ಆರಂಭವಾಗಿದೆ. ಕೇವಲ ಆನ್ಲೈನ್ ಮೀಮ್ ಆಗಿ ಆರಂಭಗೊಂಡು, ಈಗ ಬೃಹತ್ ರಾಜಕೀಯ ಆಂದೋಲನವಾಗಿ ರೂಪಾಂತರಗೊಂಡಿರುವ…
ಸುರಪುರ: ವನ್ಯಜೀವಿಗಳನ್ನು ಬೇಟೆಯಾಡಿ, ಅದನ್ನು ಪ್ರಶ್ನಿಸಲು ಹೋದ ಅರಣ್ಯಾಧಿಕಾರಿಗಳ ಮೇಲೆಯೇ ಭೀಕರ ಹಲ್ಲೆ ನಡೆಸಿ, ಜಾಲಿ ಗಿಡಕ್ಕೆ ಕಟ್ಟಿಹಾಕಿ ವಿಕೃತಿ ಮೆರೆದಿದ್ದ ಬೇಟೆಗಾರರ ಜಾಲದ ನಾಲ್ವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂರು ದಿನಗಳ ಹಿಂದೆ ಈ ಅಮಾನವೀಯ ಘಟನೆ ನಡೆದಿದೆ. ಕೆಲವು ದಿನಗಳ ಹಿಂದೆ ಕಿಡಿಗೇಡಿಗಳ ತಂಡವೊಂದು ಕಾಡುಹಂದಿಯೊಂದನ್ನು ಕ್ರೂರವಾಗಿ ಬೇಟೆಯಾಡಿ, ಆ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿತ್ತು. ಈ ವಿಡಿಯೋ…