ಹೊಸಪೇಟೆ: ಜಿಲ್ಲೆಯ ವಿಜಯನಗರ ತಾಲೂಕಿನ ನಂದಿಬಂಡಿ ಗ್ರಾಮದಲ್ಲಿ ಅಮಾನವೀಯವಾಗಿ ಜೀತಕ್ಕಿರಿಸಿಕೊಂಡಿದ್ದ ಒಡಿಶಾ ಮೂಲದ 37 ಕಾರ್ಮಿಕರನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯ ಜಂಟಿ ಕಾರ್ಯಾಚರಣೆಯ ಮೂಲಕ ಯಶಸ್ವಿಯಾಗಿ ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟವರಲ್ಲಿ 10 ಮಕ್ಕಳು, 11 ಮಹಿಳೆಯರು ಹಾಗೂ 16 ಪುರುಷರು ಸೇರಿದ್ದಾರೆ. ಬೆಳಗಾವಿ ಮೂಲದ ‘ಸ್ಪಂದನಾ’ ಎಂಬ ಸರ್ಕಾರೇತರ ಸಂಸ್ಥೆ (NGO) ನೀಡಿದ ಖಚಿತ ಮಾಹಿತಿಯ ಮೇರೆಗೆ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರ ಮಾರ್ಗದರ್ಶನದಲ್ಲಿ ಸಹಾಯಕ ಆಯುಕ್ತ ವಿವೇಕಾನಂದ ನೇತೃತ್ವದ ತಂಡ ಈ ದಾಳಿ…
ವಿಶಾಖಪಟ್ಟಣಂ: ವರದಕ್ಷಿಣೆ ಎಂಬ ಸಾಮಾಜಿಕ ಪಿಡುಗು ಮತ್ತೊಂದು ಅಮಾಯಕ ಜೀವವನ್ನು ಬಲಿಪಡೆದಿದೆ. ಕೈತುಂಬಾ ಸಂಬಳ ಪಡೆಯುವ ಸಾಫ್ಟ್ವೇರ್ ಇಂಜಿನಿಯರ್ ಪತಿಯ ವರದಕ್ಷಿಣೆ ಹಪಾಹಪಿ ಮತ್ತು ಕಿರುಕುಳಕ್ಕೆ ಸಿಲುಕಿ ತೇಜಶ್ರೀ ಎಂಬ ಯುವತಿ ವಿವಾಹವಾದ ಕೇವಲ ಎರಡೇ ತಿಂಗಳಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಮೃತ ತೇಜಶ್ರೀ ಅವರ ವಿವಾಹ ಸೋಮೇಶ್ ಎಂಬ ಸಾಫ್ಟ್ವೇರ್ ಇಂಜಿನಿಯರ್ ಜೊತೆ ಅದ್ಧೂರಿಯಾಗಿ ನಡೆದಿತ್ತು. ಮದುವೆಯ ಸಮಯದಲ್ಲಿ ತೇಜಶ್ರೀ ಪೋಷಕರು ತಮ್ಮ ಶಕ್ತಿ ಮೀರಿ 20…