ರಾಜಕೀಯ ಕ್ಷೇತ್ರದಲ್ಲಿನ ಮೌಲ್ಯಾಧಾರಿತ ನಡೆ ಹಾಗೂ ಶುದ್ಧ ರಾಜಕಾರಣಕ್ಕಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮಂಡ್ಯ ಕರ್ನಾಟಕ ಸಂಘದ ವತಿಯಿಂದ ಸ್ಥಾಪಿಸಲಾದ ಮೊದಲ ವರ್ಷದ ‘ಎಸ್.ಎಂ.ಕೃಷ್ಣ ದತ್ತಿ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಮಂಗಳವಾರ ನಗರದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾಗಿದ್ದ ‘ಮರೆಯಲಾಗದ ಎಸ್.ಎಂ.ಕೃಷ್ಣ’ ಸಂಸ್ಮರಣೆ ಸಮಾರಂಭದಲ್ಲಿ ಗಣ್ಯರ ಸಮ್ಮುಖದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ಕರ್ನಾಟಕ ಸಂಘದ ಸಹಯೋಗದೊಂದಿಗೆ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ರಾಜಕೀಯ,…
ಹೊಸಪೇಟೆ/ವಿಜಯಪುರ: ಬೆಂಗಳೂರಿನಿಂದ ಉತ್ತರ ಕರ್ನಾಟಕದ ಭಾಗಗಳಿಗೆ ಪ್ರಯಾಣಿಸುವ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಟಿಕೆಟ್ ಲಭ್ಯತೆಯನ್ನು ಸುಗಮಗೊಳಿಸಲು ನೈರುತ್ಯ ರೈಲ್ವೆ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಹೊಸಪೇಟೆ ಮಾರ್ಗವಾಗಿ ಸಂಚರಿಸುವ ಯಶವಂತಪುರ-ವಿಜಯಪುರ ಹಾಗೂ ಯಶವಂತಪುರ-ಸಿಂಧನೂರು ಎಕ್ಸ್ಪ್ರೆಸ್ ರೈಲುಗಳಿಗೆ ತಲಾ 5 ಹೆಚ್ಚುವರಿ ಬೋಗಿಗಳನ್ನು ಕಾಯಂ ಆಗಿ ಅಳವಡಿಸಲು ನಿರ್ಧರಿಸಲಾಗಿದೆ. ಈ ಹೊಸ ಬದಲಾವಣೆಯು ಇಂದು, ಮೇ 8ರಿಂದಲೇ ಜಾರಿಗೆ ಬರುತ್ತಿದ್ದು, ಪ್ರಯಾಣಿಕರ “ವೇಟಿಂಗ್ ಲಿಸ್ಟ್” ತಲೆನೋವಿಗೆ ಇದು ಬ್ರೇಕ್ ಹಾಕಲಿದೆ. ಹೆಚ್ಚುತ್ತಿರುವ ಬೇಡಿಕೆಯನ್ನು ಗಮನಿಸಿ, ಎರಡು…