ಕಾರವಾರ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾದ ಟಿ. ಶ್ಯಾಮ ಭಟ್ ಹಾಗೂ ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಮಂಗಳವಾರ ಕಾರವಾರ ನಗರದ ವಿವಿಧ ಸರ್ಕಾರಿ ಇಲಾಖೆಗಳು, ವಸತಿ ನಿಲಯಗಳು ಹಾಗೂ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ಮೊದಲಿಗೆ ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿದರು. ಅಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದ ಅವರು, ವಿದ್ಯಾರ್ಥಿಗಳೊಂದಿಗೆ ನೇರ…
ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದಲ್ಲಿ ಸಂಚಲನ ಮೂಡಿಸಿದ್ದ ಭ್ರೂಣಲಿಂಗ ಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಓರ್ವ ಮಹಿಳಾ ವೈದ್ಯೆ ಸೇರಿದಂತೆ ಒಟ್ಟು ಮೂವರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಫೋಕ್ಸೋ ಸೇರಿದಂತೆ ಒಟ್ಟು 12 ಮೊಕದ್ದಮೆಗಳು ದಾಖಲಾಗಿದ್ದು, ನಾಪತ್ತೆಯಾಗಿರುವ ಮತ್ತೋರ್ವ ವೈದ್ಯೆಗಾಗಿ ತೀವ್ರ ಶೋಧ ಮುಂದುವರಿದಿದೆ. ಬಂಧಿತರನ್ನು ಕೆ.ಆರ್. ಪೇಟೆಯ ಚೇತನ ಮೆಟರ್ನಿಟಿ ಸೆಂಟರ್ನ ಡಾ. ದಿವ್ಯಚೇತನಾ, ನಾವಿ ಡಯಾಗ್ನೋಸ್ಟಿಕ್ ಸೆಂಟರ್ನ ಡಾ. ವೈ.ಆರ್. ಹರ್ಷಿತ್ ಮತ್ತು ಕುಶಾಲ್ ಡಯಾಗ್ನೋಸ್ಟಿಕ್ ಸೆಂಟರ್ನ…