ಹುಬ್ಬಳ್ಳಿ: ಹೈದರಾಬಾದ್ನಿಂದ ಹುಬ್ಬಳ್ಳಿಗೆ ಬರುತ್ತಿದ್ದ ವಿಮಾನವೊಂದು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ, ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ ಘಟನೆ ನಡೆದಿದೆ. ತಾಂತ್ರಿಕ ದೋಷ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಸತತ ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಆತಂಕದ ಕ್ಷಣಗಳನ್ನು ಕಳೆದಿದ್ದಾರೆ. ಹೈದರಾಬಾದ್ನಿಂದ ಹೊರಟಿದ್ದ ಫ್ಲೈ 91 (Fly 91) ಏರ್ಲೈನ್ಸ್ ವಿಮಾನವು ನಿಗದಿಯಂತೆ ಸಂಜೆ 4:30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು. ಆದರೆ ರನ್ವೇ ಸಮೀಪಿಸುತ್ತಿದ್ದಂತೆ ಹವಾಮಾನ ವೈಪರೀತ್ಯದಿಂದಾಗಿ ಪೈಲಟ್…
ಬೆಂಗಳೂರು: ಕನ್ನಡ ಸಾಹಿತ್ಯ ಲೋಕದ ಧೀಮಂತ ವ್ಯಕ್ತಿತ್ವ, ಖ್ಯಾತ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಅವರಿಗೆ 2025-26ನೇ ಸಾಲಿನ ಪ್ರತಿಷ್ಠಿತ ‘ಪಂಪ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅವರು ನೀಡಿರುವ ಅನುಪಮ ಹಾಗೂ ಮಹತ್ತರ ಕೊಡುಗೆಯನ್ನು ಪರಿಗಣಿಸಿ ಕರ್ನಾಟಕ ಸರ್ಕಾರವು ಈ ಅತ್ಯುನ್ನತ ಗೌರವವನ್ನು ನೀಡಿದೆ. ಕರ್ನಾಟಕ ಸರ್ಕಾರದ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಇದಾಗಿದ್ದು, ₹10 ಲಕ್ಷ ನಗದು ಬಹುಮಾನ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಶೀಘ್ರದಲ್ಲೇ ನಡೆಯಲಿರುವ ಅಧಿಕೃತ ಸಮಾರಂಭದಲ್ಲಿ ಸರ್ಕಾರವು…