ಹಾನಗಲ್: ಪಟ್ಟಣದ ಮಧ್ಯಭಾಗದಲ್ಲಿ ತಡಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಪೈಪ್ಲೈನ್ ಅಳವಡಿಸುವ ಕಾಮಗಾರಿಗಾಗಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧೀನದಲ್ಲಿರುವ ರಾಜ್ಯ ಹೆದ್ದಾರಿ (ಎಸ್ಎಚ್–1) ರಸ್ತೆಯನ್ನು ಅಗತ್ಯ ಅನುಮತಿಯಿಲ್ಲದೆ ಅಗೆಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದ ಸಾರಿಗೆ ಘಟಕದ ಎದುರು ಸಾಂವಸಗಿ ಗ್ರಾಮದ ಕಡೆಯಿಂದ ಆರಂಭವಾಗಿರುವ ಈ ಕಾಮಗಾರಿಯಲ್ಲಿ ಜೆಸಿಬಿ ಯಂತ್ರಗಳ ಮೂಲಕ ರಸ್ತೆ ಮಧ್ಯಭಾಗವನ್ನು ಅಗೆಯಲಾಗುತ್ತಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಕಾಮಗಾರಿಯಿಂದಾಗಿ ಸಾರಿಗೆ…
ಅಮೆರಿಕದ ಸಂಸತ್ತಿನ (ಯು.ಎಸ್. ಕಾಂಗ್ರೆಸ್) ಇತಿಹಾಸದಲ್ಲಿ ಕರ್ನಾಟಕದ ನಾಯಕ, ಡಾ. ಯು. ಟಿ. ಖಾದರ್ ಫರೀದ್ ಅವರು ತಮ್ಮ ಹೆಸರನ್ನು ಸುವರ್ಣ ಅಕ್ಷರಗಳಲ್ಲಿ ದಾಖಲಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಅಪರೂಪದ ಗೌರವಕ್ಕೆ ಪಾತ್ರರಾಗಿದ್ದಾರೆ. ಅವರ ಸಾರ್ವಜನಿಕ ಸೇವೆ ಹಾಗೂ ದೂರದೃಷ್ಟಿಯ ನಾಯಕತ್ವದ ಸಾಧನೆಗಳನ್ನು ಗುರುತಿಸಿ, ಅಮೆರಿಕ ಸಂಸತ್ತಿನ ಪ್ರತಿಷ್ಠಿತ “ಫಾರ್ ದಿ ಕಾಂಗ್ರೆಸ್ಸಿನಲ್ ರೆಕಾರ್ಡ್” (For the Congressional Record) ದಾಖಲೆಯನ್ನು ಗೌರವಪೂರ್ವಕವಾಗಿ ಪ್ರದಾನ ಮಾಡಲಾಗಿದೆ. ಅಮೆರಿಕದ ಹೌಸ್ ಫಾರಿನ್ ಅಫೇರ್ಸ್ ಸಮಿತಿಯ ರ್ಯಾಂಕಿಂಗ್ ಸದಸ್ಯ,…