ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು (ಶುಕ್ರವಾರ) ಮುಂಜಾನೆ ಭೂ ವೀಕ್ಷಣಾ ಉಪಗ್ರಹ ‘EOS-05’ ಅನ್ನು ಜಿಎಸ್ಎಲ್ವಿ (GSLV) ರಾಕೆಟ್ ಮೂಲಕ ಯಶಸ್ವಿಯಾಗಿ ಕಕ್ಷೆಗೆ ಸೇರಿಸಲಾಗಿದೆ. ಇಂದು ಮುಂಜಾನೆ ಸರಿಯಾಗಿ 2:55ಕ್ಕೆ (IST) ನಭಕ್ಕೆ ಚಿಮ್ಮಿದ GSLV ರಾಕೆಟ್, ನಿಗದಿತ ಸಮಯಕ್ಕೆ ಸರಿಯಾಗಿ ಉಪಗ್ರಹವನ್ನು ಅದರ ನಿರ್ದಿಷ್ಟ ‘ಉಪ-ಜಿಯೋಸಿಂಕ್ರೊನಸ್ ವರ್ಗಾವಣೆ ಕಕ್ಷೆಗೆ’ (Sub-Geosynchronous Transfer Orbit) ಯಶಸ್ವಿಯಾಗಿ ತಲುಪಿಸಿದೆ….
ಬೆಂಗಳೂರು: ಸಿವಿಲ್ ಸ್ವರೂಪದ ಆಸ್ತಿ ವಿವಾದಕ್ಕೆ ಜಾತಿ ನಿಂದನೆ ಹಾಗೂ ಬೆದರಿಕೆಯ ಬಣ್ಣ ಬಳಿದು ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಕಾನೂನು ಪ್ರಕ್ರಿಯೆಯನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ದೂರುದಾರರನ್ನು ನ್ಯಾಯಾಲಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಆನೇಕಲ್ ತಾಲೂಕಿನ ಮಂಜುನಾಥ್ ಸೇರಿದಂತೆ ಏಳು ಜನರ ವಿರುದ್ಧ ಜಿಗಣಿಯ ಜಮೀನೊಂದಕ್ಕೆ ಸಂಬಂಧಿಸಿದಂತೆ ಸಮಾಧಿ ಕಲ್ಲು ತೆರವುಗೊಳಿಸಿ, ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಉಮಾ ಎಂಬ ಮಹಿಳೆ ದೂರು ನೀಡಿದ್ದರು. ಇದರನ್ವಯ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ…