ಬೆಂಗಳೂರು: ಮಾನ್ಯ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರ ಆದೇಶದ ಮೇರೆಗೆ ಈಶಾನ್ಯ ವಿಭಾಗದ ಅಮೃತಹಳ್ಳಿ ಪೊಲೀಸ್ ಠಾಣೆಯ ಆಡಳಿತಾತ್ಮಕ ಹಾಗೂ ತನಿಖಾ ಕಡತಗಳ ಸಮಗ್ರ ಪರಿಶೀಲನೆ (Inspection) ನಡೆಸಲಾಯಿತು. ಠಾಣೆಗೆ ಆಗಮಿಸಿದ ಹಿರಿಯ ಅಧಿಕಾರಿಗಳು ಗೌರವ ವಂದನೆ ಸ್ವೀಕರಿಸಿ, ಠಾಣೆಯ ದೈನಂದಿನ ಚಟುವಟಿಕೆಗಳು, ಕಡತಗಳ ನಿರ್ವಹಣೆ ಹಾಗೂ ಸಿಬ್ಬಂದಿಯ ಕುಂದುಕೊರತೆಗಳನ್ನು ಆಲಿಸಿದರು. ಸಿಬ್ಬಂದಿಯ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಿ ಪರಿಹಾರ ಕಂಡುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಾಹನ ಹಾಗೂ ಮುದ್ದೆಮಾಲು ವಿಲೇವಾರಿ: ಠಾಣಾ…
ಮೈಸೂರು: ಯುವ ಪೀಳಿಗೆಯನ್ನು ಹಾಳು ಮಾಡುತ್ತಿರುವ ಮಾದಕ ದ್ರವ್ಯಗಳ ಜಾಲವನ್ನು ಸಂಪೂರ್ಣವಾಗಿ ಮಟ್ಟಹಾಕಲು ಮೈಸೂರು ನಗರ ಪೊಲೀಸ್ ಇಲಾಖೆ ಭರ್ಜರಿ ತಯಾರಿ ನಡೆಸಿದೆ. ರಾಜ್ಯಾದ್ಯಂತ ಆರಂಭವಾಗಿರುವ ಬೃಹತ್ ‘ಮಾದಕ ದ್ರವ್ಯ ವಿರೋಧಿ ಅಭಿಯಾನ’ದ ಭಾಗವಾಗಿ ಸಾಂಸ್ಕೃತಿಕ ನಗರಿ ಮೈಸೂರನ್ನು ಸಂಪೂರ್ಣ ಡ್ರಗ್ಸ್ ಮುಕ್ತ ನಗರವನ್ನಾಗಿ ಮಾಡಲು ಹಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ತಿಳಿಸಿದ್ದಾರೆ. ಯುವಜನರನ್ನು ಸೆಳೆಯುವ ಸಲುವಾಗಿ ಟ್ರೆಂಡಿಂಗ್ ಆಗಿರುವ “ಬೇಡ ಬ್ರೋ” ಎಂಬ ವಿಶೇಷ ಧ್ವನಿವಾಕ್ಯದ…