ಬೆಂಗಳೂರು: ಕನಕಪುರ ನೈಸ್ ರಸ್ತೆ (NICE Road) ಸೇತುವೆಯ ಮೇಲೆ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದಿರುವ ಭೀಕರ ಘಟನೆ ಸಂಭವಿಸಿದೆ. ಅಪಘಾತದ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಾಗುವ ರಸ್ತೆಯನ್ನು ತಾತ್ಕಾಲಿಕವಾಗಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿರುವ ಸಂಚಾರ ಪೊಲೀಸರು ಹಾಗೂ ನೈಸ್ ರಸ್ತೆ ಪ್ರಾಧಿಕಾರದ ಸಿಬ್ಬಂದಿ, ಕ್ರೇನ್ ಮುಖಾಂತರ ಅಪಘಾತಕ್ಕೀಡಾದ ವಾಹನವನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ಚುರುಕುಗೊಳಿಸಿದ್ದಾರೆ. ಪರ್ಯಾಯ ಮಾರ್ಗ ಬಳಸಿ:…
ನವದೆಹಲಿ, ಜುಲೈ 18: ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ಕಾನೂನುಬದ್ಧ ರಕ್ಷಣೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಭಾರಿ ಮಹತ್ವದ ಹೆಜ್ಜೆಯಿಟ್ಟಿದೆ. ವಂದೇ ಮಾತರಂಗೆ ಅಧಿಕೃತ ಗೌರವ ನೀಡಲು ಹಾಗೂ ಅದಕ್ಕೆ ಕಾನೂನು ರಕ್ಷಣೆ ಕಲ್ಪಿಸಲು ‘ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ (ತಿದ್ದುಪಡಿ) ಮಸೂದೆ, 2026’ ಅನ್ನು ಸಂಸತ್ತಿನಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲು ಪಟ್ಟಿ ಮಾಡಿದ್ದು, ಈ ಮಸೂದೆ ಅಂಗೀಕಾರವಾದರೆ…