ನವದೆಹಲಿ, ಜು. ೧೭: ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಮಾತ್ರಕ್ಕೆ ಯಾವುದೇ ವ್ಯಕ್ತಿಯ ಭಾರತೀಯ ಪೌರತ್ವ ಕಳೆದುಹೋಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಪ್ರಾಧಿಕಾರವಲ್ಲ ಎಂದು ನ್ಯಾಯಾಲಯ ಪುನರುಚ್ಚರಿಸಿದೆ. ಪಶ್ಚಿಮ ಬಂಗಾಳದಲ್ಲಿ SIR ಪ್ರಕ್ರಿಯೆಗೆ ಸಂಬಂಧಿಸಿದ ಮೇಲ್ಮನವಿ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ನ್ಯಾಯಪೀಠವು ನಡೆಸಿತು. ನ್ಯಾಯಪೀಠದಲ್ಲಿ…
ಚಿತ್ರದುರ್ಗ: ಇಂದಿನ ಯುವ ಪೀಳಿಗೆ ಮಾದಕ ದ್ರವ್ಯಗಳ ದಾಸರಾಗದೆ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಮಾದಕ ವಸ್ತುಗಳ ಸೇವನೆ ಹಾಗೂ ಮಾರಾಟ ಕಾನೂನುಬಾಹಿರವಾಗಿದ್ದು, ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು (SP) ಎಚ್ಚರಿಕೆ ನೀಡಿದರು. ನಗರದ ಎಕ್ಸ್ಪರ್ಟ್ ಪಿ.ಯು. ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಮಾನ್ಯ ಪೊಲೀಸ್ ಅಧೀಕ್ಷಕರು, ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಸೇವನೆಯಿಂದ…