ವಿಜಯಪುರ: ಇತ್ತೀಚಿನ ದಿನಗಳಲ್ಲಿ ಯುವ ಪೀಳಿಗೆ ಹಾಗೂ ಶಾಲಾ ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದನ್ನು ತಡೆಯುವ ಮತ್ತು ಆರೋಗ್ಯವಂತ ಸಮಾಜವನ್ನು ನಿರ್ಮಿಸುವ ನಿಟ್ಟಿನಲ್ಲಿ, ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಮಾದಕ ದ್ರವ್ಯ ನಿಯಂತ್ರಣ ಕುರಿತು ವಿಶೇಷ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಸಿಬ್ಬಂದಿ ಶಂಕರ್ಲಿಂಗ್ ಕಪ್ಪೇನವರ್, ತಂಬಾಕು, ಗುಟಕಾ, ಸಿಗರೇಟ್ ಮುಂತಾದ ಮಾದಕ ವಸ್ತುಗಳ ಸೇವನೆಯು…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ಒಬ್ಬ ರೈತನ ಜಮೀನನ್ನು ಸಹ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ. ಜಮೀನು ನೀಡಲು ಇಷ್ಟವಿಲ್ಲದ ರೈತರು ಮುಕ್ತವಾಗಿ ಕೃಷಿ ಚಟುವಟಿಕೆಗಳನ್ನು ಮುಂದುವರಿಸಬಹುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಬಿಡದಿ ಯೋಜನೆಯ ಇತಿಹಾಸದ ಅಧಿಕೃತ ದಾಖಲೆಗಳನ್ನು ಪ್ರಸ್ತುತಪಡಿಸಿದ ಅವರು, ಸರ್ಕಾರ ಯಾರೊಬ್ಬರನ್ನೂ ಭೂಮಿ ನೀಡುವಂತೆ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಯಾರಿಗೆ ಭೂಮಿ ನೀಡಲು ಇಷ್ಟವಿಲ್ಲವೋ ಅವರು ಕೃಷಿ ಮಾಡಿಕೊಂಡಿರಬಹುದು….