ಕೊಚ್ಚಿ: ಮಾನ್ಯ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಮುಂಜಾನೆ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ಮಾಲೆಯನ್ನು ಧರಿಸುವ ಮೂಲಕ ಶಬರಿಮಲೆ ಪವಿತ್ರ ಯಾತ್ರೆಯನ್ನು ಆರಂಭಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿರುವ ಪ್ರಸಿದ್ಧ ಶ್ರೀ ಸುಬ್ರಮಣ್ಯ ಸ್ವಾಮಿ ದೇವಾಲಯದಲ್ಲಿ ಇಂದು ಮುಂಜಾನೆ ವಿಶೇಷ ಪೂಜೆ ಸಲ್ಲಿಸಿದ ಹೆಚ್.ಡಿ. ಕುಮಾರಸ್ವಾಮಿ ಅವರು, ಗುರುಸ್ವಾಮಿಗಳ ಸಮ್ಮುಖದಲ್ಲಿ ಇರುಮುಡಿ ಕಟ್ಟಿ ಅಯ್ಯಪ್ಪ ಮಾಲೆಯನ್ನು ಧರಿಸಿದರು. ತದನಂತರ ತಮ್ಮ ಆಪ್ತರು ಹಾಗೂ ಪಕ್ಷದ ಪ್ರಮುಖ ಮುಖಂಡರ…
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಗ್ಯಾರಂಟಿಗಳ ದುರ್ಬಳಕೆ ಹಾಗೂ ಹಣ ಸೋರಿಕೆಯನ್ನು ತಡೆಯಲು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸುವ ನಿಟ್ಟಿನಲ್ಲಿ ಎರಡೂ ಯೋಜನೆಗಳಿಗೆ ಹೊಸದಾಗಿ ಅರ್ಜಿ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶನಿವಾರ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ (SP) ಜೊತೆ ನಡೆಸಿದ ರಾಜ್ಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ….