ರಾಣೇಬೆನ್ನೂರು: ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಹಾಗೂ ಹಾವೇರಿ ಜಿಲ್ಲೆಯಲ್ಲೇ ದೊಡ್ಡ ವ್ಯಾಪಾರ ಕೇಂದ್ರವಾಗಿರುವ ವಾಣಿಜ್ಯ ನಗರಿ ರಾಣೇಬೆನ್ನೂರಿನ ನಾಗರಿಕರ ಸುರಕ್ಷತೆಗಾಗಿ ನಗರಕ್ಕೆ ಮತ್ತೊಂದು ಹೆಚ್ಚುವರಿ ಪೊಲೀಸ್ ಠಾಣೆಯ ಅಗತ್ಯವಿದೆ. ಈ ಕೂಡಲೇ ಹೊಸ ಠಾಣೆಯನ್ನು ಮಂಜೂರು ಮಾಡಿಕೊಡಬೇಕು ಎಂದು ರೈತರು, ವರ್ತಕರು, ಉದ್ಯಮಿಗಳು, ಕಾರ್ಮಿಕರು ಹಾಗೂ ನಾಗರಿಕರು ಪೂರ್ವ ವಲಯದ ಐಜಿಪಿ ಡಾ. ಬಿ. ಆರ್. ರವಿಕಾಂತೇಗೌಡ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಇಲ್ಲಿನ ಪೊಲೀಸ್ ಠಾಣೆಗೆ ಐಜಿಪಿ ಡಾ. ಬಿ. ಆರ್….
ದಾವಣಗೆರೆ: ಚಲಿಸುವ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿ ಪ್ರಯಾಣಿಕರ ಸುರಕ್ಷತೆಗೆ ಆತಂಕ ಮೂಡಿಸುತ್ತಿದ್ದ ಮೂವರು ಅಪ್ರಾಪ್ತ ಬಾಲಕರನ್ನು ದಾವಣಗೆರೆ ರೈಲ್ವೆ ರಕ್ಷಣಾ ಪಡೆ (RPF) ಯಶಸ್ವಿಯಾಗಿ ಪತ್ತೆಹಚ್ಚಿ ವಶಕ್ಕೆ ಪಡೆದಿದೆ. ಬ್ಯಾಡಗಿ ಮತ್ತು ಹಾವೇರಿ ರೈಲು ನಿಲ್ದಾಣಗಳ ಮಧ್ಯೆ ಇತ್ತೀಚೆಗೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಪಿಎಫ್ ಸಿಬ್ಬಂದಿ ಈ ಪ್ರಮುಖ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ ಮೇ 28, 2026 ರಂದು ಬ್ಯಾಡಗಿ ಮತ್ತು ಹಾವೇರಿ ರೈಲು ನಿಲ್ದಾಣಗಳ ನಡುವಿನ ರೈಲ್ವೆ ಹಳಿಯ…