ಮಂಗಳೂರು: ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಳ್ಳಾಲ್ಬಾಗ್ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಕರ್ತವ್ಯ ನಿರತರಾಗಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಅತಿವೇಗ ಹಾಗೂ ನಿರ್ಲಕ್ಷ್ಯದ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಓರ್ವ ಸಿಬ್ಬಂದಿಯ ಬೆನ್ನುಮೂಳೆ ಮತ್ತು ಕಾಲು ಮುರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಸುಮಾರು 11:30ರ ವೇಳೆಗೆ ಬಳ್ಳಾಲ್ಬಾಗ್ ಜಂಕ್ಷನ್ ಬಳಿ ನಡೆದಿದ್ದ ಅಪಘಾತ ಪ್ರಕರಣವೊಂದರ ಪರಿಶೀಲನೆ ನಡೆಸಲು ಬರ್ಕೆ ಠಾಣೆಯ ಪೊಲೀಸ್ ಸಿಬ್ಬಂದಿಗಳಾದ ಕುಮಾರ್ ಮತ್ತು ವಿಠಲದಾಸ್ ಅವರು…
ಬೆಂಗಳೂರು: ದೇಶದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಹೆಸರಲ್ಲೇ ನಕಲಿ ಬಿಡುಗಡೆ ಆದೇಶ ಸೃಷ್ಟಿಸಿದ ಜಾಲ, ಅಕ್ರಮ ಪರೋಲ್ ಮಂಜೂರಾತಿ ಹಾಗೂ ನಕಲಿ ಜಾತಿ ಪ್ರಮಾಣಪತ್ರ ಬಳಸಿ ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಿದ್ದ ಕಾರಾಗೃಹ ಇಲಾಖೆಯ ಅಂದಿನ ಮುಖ್ಯ ಅಧೀಕ್ಷಕ ಎಂ. ಸೋಮಶೇಖರ್ ಮತ್ತು ಗ್ಯಾಂಗ್ ವಿರುದ್ಧ ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ಎಫ್ಐಆರ್ (FIR) ದಾಖಲಾಗಿದೆ. ಕೇಂದ್ರ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಕರ್ಣ ಬಿ. ಕ್ಷತ್ರಿಯ ಅವರು ನೀಡಿದ ದೂರಿನ ಮೇರೆಗೆ ಸದ್ಯ…