ನವದೆಹಲಿ/ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಹೈಡ್ರಾಮಾ ಇದೀಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ದೆಹಲಿಯಲ್ಲಿ ನಡೆದ ಹೈಕಮಾಂಡ್ ಸಭೆಯ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮನಸ್ಸು ಮಾಡಿದ್ದಾರೆ ಎಂಬ ಸ್ಫೋಟಕ ಮಾಹಿತಿ ರಾಜಕೀಯ ವಲಯದಿಂದ ಹೊರಬಿದ್ದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸುಮಾರು ಆರು ಗಂಟೆಗಳ ಕಾಲ ನಡೆದ ಸುದೀರ್ಘ ಮ್ಯಾರಾಥಾನ್ ಸಭೆಯಲ್ಲಿ ರಾಜ್ಯ ನಾಯಕತ್ವ ಬದಲಾವಣೆ ಕುರಿತು ಗಂಭೀರ…
ಬೆಂಗಳೂರು: ಸಿಟಿಯ ಸಿಸಿಬಿ ಮಾದಕ ದ್ರವ್ಯ ನಿಗ್ರಹದಳದ ಪೊಲೀಸರು ತಂಗುದಾಣವಿಲ್ಲದೆ ಸಾಗುತ್ತಿದ್ದ ಡ್ರಗ್ಸ್ ಜಾಲಕ್ಕೆ ಭರ್ಜರಿ ಬ್ರೇಕ್ ಹಾಕಿದ್ದಾರೆ. ವಿದೇಶದಿಂದ ಪಾರ್ಸೆಲ್ ಮೂಲಕ ನಗರಕ್ಕೆ ಸರಬರಾಜಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋ ಗಾಂಜಾವನ್ನು ಸಿಸಿಬಿ ಪೊಲೀಸರು ಯಶಸ್ವಿಯಾಗಿ ಜಪ್ತಿ ಮಾಡಿದ್ದಾರೆ. ನಗರದ ಫಾರಿನ್ ಪೋಸ್ಟ್ ಆಫೀಸ್ಗೆ ಬಂದಿದ್ದ ಅನುಮಾನಾಸ್ಪದ ಪಾರ್ಸೆಲ್ಗಳ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಮಾದಕ ದ್ರವ್ಯ ನಿಗ್ರಹದಳದ ಅಧಿಕಾರಿಗಳು ಮತ್ತು ಸಿಬ್ಬಂದಿ…