ಬೀಜಿಂಗ್: ವಿಶ್ವದ ದೊಡ್ಡಣ್ಣ ಚೀನಾದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಚೀನಾದ ಅತ್ಯಂತ ಪ್ರಮುಖ ಕಲ್ಲಿದ್ದಲು ಉತ್ಪಾದನಾ ಪ್ರದೇಶವಾದ ಶಾಂಕ್ಸಿ ಪ್ರಾಂತ್ಯದ ‘ಲಿಯುಶೆನ್ಯು’ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಜೀವ ದಹನವಾಗಿದ್ದಾರೆ ಎಂದು ಚೀನಾದ ಅಧಿಕೃತ ರಾಜ್ಯ ಮಾಧ್ಯಮಗಳು ವರದಿ ಮಾಡಿವೆ. ಗಣಿಯ ಆಳದಲ್ಲಿ ಸಿಲುಕಿರುವ ಇನ್ನುಳಿದ ಕಾರ್ಮಿಕರ ರಕ್ಷಣೆಗಾಗಿ ಸದ್ಯ ಯುದ್ಧೋಪಾದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಕಲ್ಲಿದ್ದಲು ಗಣಿಯ ತಳಭಾಗದಲ್ಲಿ ಕಾರ್ಮಿಕರು ಎಂದಿನಂತೆ ಕೆಲಸ ಮಾಡುತ್ತಿದ್ದಾಗ ಈ ಆಕಸ್ಮಿಕ…
ಬೆಂಗಳೂರು: ವಿದ್ಯಾಬುದ್ಧಿ ಕಲಿಸಿ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಬೇಕಾದ ಶಾಲೆಯ ಮುಖ್ಯೋಪಾಧ್ಯಾಯನೇ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಆಕೆಯನ್ನು ಗರ್ಭಿಣಿ ಮಾಡಿರುವ ಆಘಾತಕಾರಿ ಹಾಗೂ ಅತಿ ಹೀನ ಘಟನೆ ರಾಜಧಾನಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಕೈಗೊಂಡ ಶ್ರೀರಾಂಪುರ ಠಾಣೆಯ ಪೊಲೀಸರು, ನಿವೃತ್ತಿಯ ಅಂಚಿನಲ್ಲಿದ್ದ 59 ವರ್ಷದ ಕಾಮುಕ ಮುಖ್ಯೋಪಾಧ್ಯಾಯನನ್ನು ಶುಕ್ರವಾರದಂದು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಚಂದ್ರಯ್ಯ ಎಂದು ಗುರುತಿಸಲಾಗಿದ್ದು, ಮಾನ್ಯ ನ್ಯಾಯಾಲಯವು ಆತನಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ…