ಬರ ಪರಿಸ್ಥಿತಿ ಹಾಗೂ ಆರ್ಥಿಕ ಸಂಕಷ್ಟದಿಂದಾಗಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ರಾಜ್ಯದ ರೈತ ಕುಟುಂಬಗಳ ಹಿತರಕ್ಷಣೆಗಾಗಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಕಂಗಾಲಾಗಿರುವ ಮೃತ ರೈತರ ಪತ್ನಿಯರ ಆರ್ಥಿಕ ಸಬಲೀಕರಣ ಹಾಗೂ ನೆರವಿಗಾಗಿ ಸರ್ಕಾರದಿಂದ ಮಾಸಿಕ 2,000 ರೂಪಾಯಿಗಳ ವಿಶೇಷ ವಿಧವಾ ವೇತನ (ಪಿಂಚಣಿ) ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವಲಯದ ನಿರ್ದೇಶನಾಲಯದ ವತಿಯಿಂದ ರಾಜ್ಯಾದ್ಯಂತ ಈ ಯೋಜನೆಯನ್ನು ಜಾರಿ ಮಾಡಲಾಗಿದ್ದು, ಅರ್ಹ ರೈತ ಮಹಿಳೆಯರು ಇದರ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಸರ್ಕಾರ…
ಕೊಡಗು ಜಿಲ್ಲೆಯಲ್ಲಿ ಆಗಾಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಮನೆಯ ಸುತ್ತಮುತ್ತ ಹೂಕುಂಡ, ಟೈರು ಹಾಗೂ ತೆಂಗಿನ ಚಿಪ್ಪುಗಳಲ್ಲಿ ನೀರು ನಿಲ್ಲದಂತೆ ಸಾರ್ವಜನಿಕರು ಗಮನ ಹರಿಸಬೇಕು. ಜಿಲ್ಲೆಯಲ್ಲಿ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಿ, ಈ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕುರಿತ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿ…