ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿರುವ ಮಾಧ್ಯಮ ರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಪತ್ರಕರ್ತರನ್ನು ಮಾನ್ಯತೆ ಹೊಂದಿರುವವರು-ಹೊಂದಿಲ್ಲದವರು, ಅಸಲಿ-ನಕಲಿ ಹಾಗೂ ಸ್ವತಂತ್ರ-ವೃತ್ತಿನಿರತ ಎಂದು ವರ್ಗೀಕರಿಸಿ ತಾರತಮ್ಯ ಮಾಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಆಲ್ ಇಂಡಿಯಾ ನ್ಯೂಸ್ ಅಕಾಡೆಮಿಯ ಅಧ್ಯಕ್ಷರಾದ ತ್ಯಾಗರಾಜ್ ವಿ. ಎಸ್. ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಧರ್ಮವನ್ನು ಪಾಲಿಸುವ ಮತ್ತು ಸಂವಿಧಾನ ನೀಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಪ್ರತಿಯೊಬ್ಬರನ್ನೂ ಸಮಾನವಾಗಿ ‘ಪತ್ರಕರ್ತ’ ಎಂದೇ ಪರಿಗಣಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ. …
ಬೆಂಗಳೂರು: ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂದೇ ಕರೆಯಲ್ಪಡುವ ಮಾಧ್ಯಮರಂಗದಲ್ಲಿ ಅಹರ್ನಿಶಿ ದುಡಿಯುವ ಪತ್ರಕರ್ತರ ಬದುಕು ಇಂದು ಅತ್ಯಂತ ಅಸುರಕ್ಷಿತವಾಗಿದೆ. ವಿಶೇಷವಾಗಿ ಗ್ರಾಮೀಣ ಮತ್ತು ಜಿಲ್ಲಾ ಮಟ್ಟದ ಪತ್ರಕರ್ತರು ಕನಿಷ್ಠ ವೇತನ, ಆರೋಗ್ಯ ಸುರಕ್ಷೆ ಹಾಗೂ ಸಾಮಾಜಿಕ ಭದ್ರತೆಯಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಪತ್ರಕರ್ತರಿಗೆ ಸರಕಾರದಿಂದ ಸಿಗಬೇಕಾದ ಮೂಲಭೂತ ಸೌಕರ್ಯಗಳನ್ನು ಕಾನೂನು ಹೋರಾಟದ ಮೂಲಕ ಪಡೆದುಕೊಳ್ಳಲು ಕರ್ನಾಟಕ ರಾಜ್ಯ ವೃತ್ತಿನಿರತ ಪತ್ರಕರ್ತರ ಸಂಘವು ಬಲಿಷ್ಠ ನೀಲನಕ್ಷೆಯೊಂದನ್ನು ಸಿದ್ಧಪಡಿಸಿದೆ. ಕೇವಲ ಪ್ರತಿಭಟನೆಗಳಿಗೆ ಸೀಮಿತವಾಗದೆ, ನ್ಯಾಯಾಲಯದ ಮೂಲಕ ಸರಕಾರವನ್ನು…