ಬ್ಯಾಡಗಿ: ಪಟ್ಟಣದ ವೈಭವಲಕ್ಷ್ಮಿ ಬಡಾವಣೆ ಹಾಗೂ ಛತ್ರ ರಸ್ತೆಯ ಸಮೀಪ ಅಪರಿಚಿತ ವ್ಯಕ್ತಿಗಳಿಬ್ಬರು ಮಕ್ಕಳಿಗೆ ಚಾಕೊಲೇಟ್ ಹಾಗೂ ಚಿಪ್ಸ್ ನೀಡುವ ಆಮಿಷ ಒಡ್ಡಿ ಮಾತಿಗೆಳೆಯಲು ಯತ್ನಿಸಿದ ಘಟನೆ ವರದಿಯಾಗಿದ್ದು, ಸಾರ್ವಜನಿಕರು ಹಾಗೂ ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಇತ್ತೀಚೆಗೆ ನಾಡಿನಾದ್ಯಂತ ಮಕ್ಕಳ ಅಪಹರಣ ಪ್ರಕರಣಗಳ ಕುರಿತು ವದಂತಿ ಹಾಗೂ ಘಟನೆಗಳು ವರದಿಯಾಗುತ್ತಿರುವ ಬೆನ್ನಲ್ಲೇ, ಬ್ಯಾಡಗಿಯಲ್ಲಿ ಈ ಘಟನೆ ಸಂಭವಿಸಿದೆ. ರಸ್ತೆಯಲ್ಲಿ ಆಟವಾಡುತ್ತಿದ್ದ ಹಾಗೂ ಓಡಾಡುತ್ತಿದ್ದ ಮಕ್ಕಳಿಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ಚಾಕೊಲೇಟ್ ಮತ್ತು ಚಿಪ್ಸ್ ನೀಡಿ…
ಬೀದರ್: ಕರ್ನಾಟಕ ಮತ್ತು ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಹಾಗೂ ಸುಲಿಗೆಯಂತಹ 55ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರು ಕುಖ್ಯಾತ ಅಂತರರಾಜ್ಯ ರೂಢಿಗತ ಕಳ್ಳರನ್ನು ಹುಮನಾಬಾದ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳಿಂದ ಸುಮಾರು 54,74,000 ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ವಿವರ: ಬಂಗಾರದ ಆಭರಣಗಳು: 28.5 ತೊಲೆ (ಅಂದಾಜು ಮೌಲ್ಯ 42,75,000 ರೂ.) ಬೆಳ್ಳಿಯ ಆಭರಣಗಳು: 22 ತೊಲೆ (ಅಂದಾಜು…