ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕಾನೂನು ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡುವ ಹಾಗೂ ಅವರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಇರುವ ಭಯವನ್ನು ಹೋಗಲಾಡಿಸುವ ನಿಟ್ಟಿನಲ್ಲಿ, ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ವಿಶೇಷ ‘ತೆರೆದ ಮನೆ’ (Open House) ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಅರಮೇರಿ ಶಾಲೆಯ ಮಕ್ಕಳನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಠಾಣೆಯ ಅಧಿಕಾರಿಗಳು ಮಕ್ಕಳಿಗೆ ಆತ್ಮೀಯವಾಗಿ ಸ್ವಾಗತ ಕೋರಿ, ಪೊಲೀಸ್ ಠಾಣೆಯ ದೈನಂದಿನ ಕಾರ್ಯವೈಖರಿ, ಕಡತಗಳ ನಿರ್ವಹಣೆ ಹಾಗೂ ಬಳಸುವ ತಂತ್ರಜ್ಞಾನಗಳ ಕುರಿತು…
ಮಡಿಕೇರಿ: ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಮತ್ತು ಸಾರ್ವಜನಿಕರಲ್ಲಿ ಸುರಕ್ಷಿತ ಚಾಲನೆಯ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ, ಮಡಿಕೇರಿ ಸಂಚಾರಿ ಪೊಲೀಸ್ ಠಾಣೆಯ ವತಿಯಿಂದ ದ್ವಿಚಕ್ರ ವಾಹನ ಸವಾರರಿಗೆ ಕಡ್ಡಾಯ ಹೆಲ್ಮೆಟ್ ಧಾರಣೆ ಹಾಗೂ ಸಂಚಾರ ನಿಯಮಗಳ ಪಾಲನೆ ಕುರಿತು ವಿಶೇಷ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಸಂಚಾರಿ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರನ್ನು ತಡೆದು, ಹೆಲ್ಮೆಟ್ ಧರಿಸುವುದರ ಮಹತ್ವವನ್ನು ಮನವರಿಕೆ…