ಬೆಂಗಳೂರು: ಪಾರ್ಟಿಯೊಂದರಲ್ಲಿ ಸ್ನೇಹಿತರ ನಡುವೆ ನಡೆದ ಅಸಂಬದ್ಧ ತಮಾಷೆ ಹಾಗೂ ಕ್ಷಣಿಕ ಕೋಪದ ಹಲ್ಲೆಯು ಕೊನೆಗೆ ಯುವಕನೊಬ್ಬನ ಆತ್ಮಹತ್ಯೆಗೆ ಕಾರಣವಾಗಿರುವ ಘೋರ ದುರ್ಘಟನೆ ಸಿಲಿಕಾನ್ ಸಿಟಿಯಲ್ಲಿ ಸಂಭವಿಸಿದೆ. ಮೂಲತಃ ತ್ರಿಪುರಾ ಮೂಲದ, ಬೆಂಗಳೂರಿನ ಕೋರಮಂಗಲದ ಪಬ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ತಪಾನ್ ನಾಥ್ (೨೮) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇತ್ತೀಚೆಗೆ ತಪಾನ್ ನಾಥ್ ತನ್ನ ಸ್ನೇಹಿತರೊಂದಿಗೆ ಪಾರ್ಟಿಯೊಂದಕ್ಕೆ ಹೋಗಿದ್ದಾಗ ಸ್ನೇಹಿತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ತಮಾಷೆಗಾಗಿಯೋ ಅಥವಾ ಸಿಟ್ಟಿನಿಂದಲೋ ಸ್ನೇಹಿತರು ತಪಾನ್ನ…
ಚಿಕ್ಕಬಳ್ಳಾಪುರ: ಬಟ್ಟೆ ಖರೀದಿಸಲು ಪೋಷಕರೊಂದಿಗೆ ಬಂದಿದ್ದ ನಾಲ್ಕು ವರ್ಷದ ಮಗುವೊಂದು ಆಟವಾಡುತ್ತಾ ಅಂಗಡಿಯ ಮೊದಲ ಮಹಡಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿರುವ ದುರ್ಘಟನೆ ಚಿಕ್ಕಬಳ್ಳಾಪುರ ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್ನಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ ಹಾಗೂ ಮಧು ದಂಪತಿಯ ಪುತ್ರಿ ಗಗನ ಸಿಂಧು (೪) ಗಾಯಗೊಂಡ ಬಾಲಕಿ. ಪೋಷಕರು ಕಾಂಪ್ಲೆಕ್ಸ್ನ ಬಟ್ಟೆ ಅಂಗಡಿಯಲ್ಲಿ ಬಟ್ಟೆ ಖರೀದಿಸುವಲ್ಲಿ ನಿರತರಾಗಿದ್ದಾಗ, ಪೋಷಕರ ಗಮನ ತಪ್ಪಿಸಿ ಮಗು ಆಟವಾಡುತ್ತಾ ಮೊದಲ ಮಹಡಿಯ ಗ್ರಿಲ್ ಹತ್ತಿದ್ದಾಳೆ….