ಗದಗ: ಬಡ್ಡಿ ದಂಧೆಕೋರರ ನಿರಂತರ ಕಿರುಕುಳ ಹಾಗೂ ಬೆದರಿಕೆಗೆ ಮನನೊಂದು ವ್ಯಕ್ತಿಯೊಬ್ಬರು ಸೆಲ್ಫಿ ವಿಡಿಯೋ ಹಾಗೂ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಧೃತಿಗೆಡಿಸುವ ಘಟನೆ ಗದಗ ನಗರದಲ್ಲಿ ನಡೆದಿದೆ. ನಗರದ ಕರೆಮ್ಮಕಲ್ ಬಡಾವಣೆಯ ನಿವಾಸಿ ಸಂಪತ್ ದಂಡಗಿ (38) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಘಟನೆಗೆ ಸಂಬಂಧಿಸಿದಂತೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವರು ಸಂಪತ್ ಅವರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ಹಾಗೂ ಬೆದರಿಕೆ ಹಾಕುತ್ತಿದ್ದರು…
ಆನೇಕಲ್: ಶಾಲಾ ಶಿಕ್ಷಕಿಯೊಬ್ಬರು ಸಾರ್ವಜನಿಕವಾಗಿ ನಿಂದಿಸಿ, ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಅತ್ಯಂತ ಕರುಣಾಜನಕ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಮಡಿವಾಳ ಗ್ರಾಮದಲ್ಲಿ ನಡೆದಿದೆ. ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಮಧುಶ್ರೀ ಎಂಬ ಬಾಲಕಿಯೇ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಳಗ್ಗೆ ಪೋಷಕರು ಗಮನಿಸಿದಾಗ ಮಗಳ ಆತ್ಮಹತ್ಯೆಯ ಕಟು ಸತ್ಯ ಬೆಳಕಿಗೆ…