ತುಮಕೂರು: ಸಿನಿಮಾ ಕಥೆ ಹಾಗೂ ಕ್ರೈಂ ವೆಬ್ ಸೀರೀಸ್ಗಳನ್ನೂ ಮೀರಿಸುವಂತೆ ರಾಜ್ಯವ್ಯಾಪಿ ಹರಡಿದ್ದ ಖೋಟಾ ನೋಟು (Fake Note) ದಂಧೆಯ ಬೃಹತ್ ಜಾಲವನ್ನು ಜಾಲಾಡುವಲ್ಲಿ ಜಿಲ್ಲೆಯ ಚಿಕ್ಕನಾಯಕನಹಳ್ಳಿ ಮತ್ತು ಹುಳಿಯೂರು ಪೊಲೀಸರು ಜಂಟಿಯಾಗಿ ಯಶಸ್ವಿಯಾಗಿದ್ದಾರೆ. ಕೇವಲ ಒಂದೇ ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಬೆನ್ನತ್ತಿದ ಖಾಕಿ ಪಡೆ, ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ವಿವಿಧೆಡೆ ನೆಟ್ವರ್ಕ್ ಹೊಂದಿದ್ದ ಮುದ್ರಣ, ಮಾರಾಟ ಮತ್ತು ಚಲಾವಣೆಯ ಪ್ರತ್ಯೇಕ ವ್ಯವಸ್ಥಿತ ಜಾಲವನ್ನು ಧ್ವಂಸಗೊಳಿಸಿ, ಆರು ಮಂದಿ…
ವಿಜಯನಗರ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಸಾಲು ಸಾಲು ಕಳ್ಳತನ ಪ್ರಕರಣಗಳನ್ನು ಅತ್ಯಂತ ಸಮರ್ಥವಾಗಿ ಭೇದಿಸುವಲ್ಲಿ ಹೊಸಪೇಟೆ ಹಾಗೂ ಹರಪನಹಳ್ಳಿ ಉಪವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ಕರ್ತವ್ಯದಕ್ಷತೆ ಮೆರೆದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಈ ಸಾಧನೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು (ಎಸ್ಪಿ) ಮುಕ್ತಕಂಠದಿಂದ ಪ್ರಶಂಸಿಸಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ, ತನಿಖೆಯನ್ನು ತ್ವರಿತಗೊಳಿಸಿತ್ತು. ಕಾರ್ಯಾಚರಣೆಗೆ ಇಳಿದ ವಿಶೇಷ ಪೊಲೀಸ್ ತಂಡವು ಚಾಣಾಕ್ಷತನದಿಂದ ಆರೋಪಿಗಳ ಸುಳಿವು ಪತ್ತೆಹಚ್ಚಿ, ಅವರನ್ನು…