ಹಾವೇರಿ: ಮೊಬೈಲ್ ಕ್ಯಾಂಟೀನ್ ಯೋಜನೆ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ (ಕನ್ಸಲ್ಟೆಂಟ್) ಮಲಕ್ ಸಾಬ್ ನದಾಪ್ ಎಂಬಾತ ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ರವಿಚಂದ್ರ ನಿಂಗಪ್ಪ ಮೈದೂರು ಎಂಬುವರು ಪ್ರವಾಸೋದ್ಯಮ ಇಲಾಖೆಯ ಮೊಬೈಲ್ ಕ್ಯಾಂಟೀನ್ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಯೋಜನೆಯಡಿ ಸೌಲಭ್ಯ ಮಂಜೂರು ಮಾಡಿಕೊಡಲು ಅಧಿಕಾರಿ ಮಲಕ್ ಸಾಬ್ ೨೦,೦೦೦ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು. ಲಂಚ ನೀಡಲು ಇಚ್ಛಿಸದ ರವಿಚಂದ್ರ ಅವರು…
ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ೯ ಕೋಟಿ ರೂಪಾಯಿ ನಗದನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಜಪ್ತಿ ಮಾಡಿದ್ದಾರೆ. ಆಗಸ್ಟ್ ೧೮ರಂದು ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ಆದಾಯ ತೆರಿಗೆ (ಐಟಿ) ಅಧಿಕಾರಿಗಳಿಂದ ಬಂದ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಸಂಶಯಾಸ್ಪದ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಯಾವುದೇ ಅಧಿಕೃತ ದಾಖಲೆಗಳಿಲ್ಲದ ಭಾರಿ ಪ್ರಮಾಣದ ಹಣ ಪತ್ತೆಯಾಗಿದೆ. ಸದರಿ ನಗದು ಹಾಗೂ ಕಾರನ್ನು ವಶಕ್ಕೆ ಪಡೆದ ಪೊಲೀಸರು ಚಾಲಕ ಹಾಗೂ…