ಬೆಂಗಳೂರು: “ನಾನು ಮನೆಯಿಂದ ಆಚೆ ಬರುವುದಕ್ಕೆ ಭಾರತದ ಸಂವಿಧಾನದ ರಕ್ಷಣೆ ಇದೆ. ಮುಕ್ತವಾಗಿ ಮಾತನಾಡುವುದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ನೈತಿಕ ಧೈರ್ಯವಿದೆ,” ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ R. ಅಶೋಕ್ ಅವರ “RSS ಎದುರು ಹಾಕಿಕೊಂಡರೆ ನೀವು ಮನೆಯಿಂದ ಆಚೆ ಬರಲು ಆಗುವುದಿಲ್ಲ” ಎಂಬ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಚಿವರು, ಈ ರೀತಿಯ ಬೆದರಿಕೆ ಮಾತುಗಳ ಹಿಂದಿನ…
ಗದಗ (ಆ. 17): ನಗರದಲ್ಲಿ ನಡೆದ ಮಾನಸಿಕ ಅಸ್ವಸ್ಥ ಯುವತಿಯ ಮೇಲಿನ ನಿರಂತರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರಬಿದ್ದಿದ್ದು, ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಸಂತ್ರಸ್ತೆ ಮೂರು ತಿಂಗಳ ಗರ್ಭಿಣಿಯಾದ ಬಳಿಕ ಈ ಕೃತ್ಯ ಬೆಳಕಿಗೆ ಬಂದಿದೆ. ಬೆಟಗೇರಿಯ ನಿವಾಸಿಗಳಾದ ಸಿಕಂದರ ಬೇಪಾರಿ, ಶಬ್ಬೀರ ಅಹ್ಮದ್ ಲಂಗೋಟಿ, ಪ್ರದೀಪ್ ನವಲೇಕರ್ ಹಾಗೂ ಭರತ ಕೊರವರ ಎಂಬುವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಕೃತ್ಯ ಮುಚ್ಚಿಹಾಕಲು ಅಕ್ರಮ ಗರ್ಭಪಾತ:…