ಹಾಸನ: ನಗರದ ಉದಯಗಿರಿ ಬಡಾವಣೆಯ ಮನೆಯೊಂದರಲ್ಲಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಮನೆ ಸಂಪೂರ್ಣ ಜಖಂಗೊಂಡಿರುವ ಭೀಕರ ಘಟನೆ ಸಂಭವಿಸಿದೆ. ಘಟನೆಯಲ್ಲಿ ದಿವ್ಯಾಮಣಿ (55) ಹಾಗೂ ಅವರ ಮಗಳು ಮಾಲತಿ (25) ತೀವ್ರವಾಗಿ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಹಾಗೂ ಮೇಲ್ಛಾವಣಿಯ ಶೀಟ್ಗಳು ಧರಾಶಾಹಿಯಾಗಿದ್ದು, ಮನೆಯಲ್ಲಿದ್ದ ಗೃಹಬಳಕೆ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ. ದಿಢೀರ್ ಸಂಭವಿಸಿದ ಭಾರಿ ಸದ್ದಿನ ಸ್ಫೋಟದಿಂದ ಸುತ್ತಮುತ್ತಲ ನಿವಾಸಿಗಳು ತೀವ್ರ ಆತಂಕ ಹಾಗೂ ಗಾಬರಿಗೊಳಗಾದರು. …
ಬೆಂಗಳೂರು: ನಗರದ ಪ್ರತಿಷ್ಠಿತ UB ಸಿಟಿಯಲ್ಲಿ ಕಾರ್ಯಾಚರಿಸುತ್ತಿದ್ದ ಪ್ರಖ್ಯಾತ ‘ಸ್ಕೈ ಕಿಚನ್’ (Sky Kitchen) ರೆಸ್ಟೋರೆಂಟ್ಗೆ ಆರೋಗ್ಯ ಇಲಾಖೆ ಹಾಗೂ ಭಾರತೀಯ ಆಹಾರ ಭದ್ರತೆ ಮತ್ತು ಗುಣಮಟ್ಟ ಪ್ರಾಧಿಕಾರದ (FSSAI) ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಸೀಲ್ ಮಾಡಿದ್ದಾರೆ. ತಪಾಸಣೆಯ ವೇಳೆ ಕಿಚನ್ನಲ್ಲಿ ಅತೀವ ನಿರ್ಲಕ್ಷ್ಯ ವಹಿಸಿರುವುದು ಕಂಡುಬಂದಿದ್ದು, ಆಹಾರ ತಯಾರಿಕೆಗೆ ಕೊಳೆತು ಹೋಗಿದ್ದ ಮತ್ತು ಹಾಳಾಗಿದ್ದ ಚಿಕನ್ ಹಾಗೂ ಮಟನ್ ಅನ್ನು ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ. ಸಾರ್ವಜನಿಕರ ಆರೋಗ್ಯದ ಜೊತೆ ಆಟವಾಡುತ್ತಿದ್ದ ಈ ಗಂಭೀರ…