ಕೋಲಾರ: “ಮನೆಯಲ್ಲೇ ಕುಳಿತು ಕೆಲಸ ಮಾಡಿ, ತಿಂಗಳಿಗೆ ಬಂಪರ್ ಗಳಿಸಿ” ಎಂಬ ಆಕರ್ಷಕ ಆಮಿಷಕ್ಕೆ ಬಿದ್ದು, ನೂರಾರು ಜನರು ಕೋಟ್ಯಂತರ ರೂಪಾಯಿ ಕಳೆದುಕೊಂಡು ಬೀದಿಗೆ ಬಿದ್ದಿರುವ ಘಟನೆ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಕೋಲಾರದ ಪಾಲಸಂದ್ರ ಬಡಾವಣೆಯಲ್ಲಿ ಕಾರ್ಯಾಚರಿಸುತ್ತಿದ್ದ ‘ಶ್ರೀ ಕಾಳಿಕಾದೇವಿ ಎಂಟರ್ಪ್ರೈಸಸ್’ ಎಂಬ ಸಂಸ್ಥೆ ಈ ಬೃಹತ್ ವಂಚನೆ ಎಸಗಿದೆ. ಮನೆಯಲ್ಲೇ ಕುಳಿತು ಊದುಬತ್ತಿ ಹಾಗೂ ಕರ್ಪೂರದ ಕಚ್ಚಾ ವಸ್ತುಗಳನ್ನು ಪ್ಯಾಕ್ ಮಾಡಿ ಕೊಟ್ಟರೆ ಭಾರಿ ಮೊತ್ತದ ಲಾಭ ಮತ್ತು ಸಂಬಳ ನೀಡುವುದಾಗಿ ಜನರನ್ನು ನಂಬಿಸಲಾಗಿತ್ತು….
ಶಿವಮೊಗ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್ 10 ರಂದು ಜಿಲ್ಲಾದ್ಯಂತ ‘ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 1 ರಿಂದ 19 ವರ್ಷದೊಳಗಿನ ಎಲ್ಲ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ‘ರಾಷ್ಟ್ರೀಯ ಜಂತು ಹುಳು ನಿವಾರಣೆ ದಿನ’ದ ಪೂರ್ವಭಾವಿ ಹಾಗೂ ‘ರಾಷ್ಟ್ರೀಯ ವಾಹಕಗಳಿಂದ ಹರಡುವ ರೋಗ ನಿಯಂತ್ರಣ ಕಾರ್ಯಕ್ರಮ’ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. …