ಮಂಡ್ಯ / ಶ್ರೀರಂಗಪಟ್ಟಣ: ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ವತಿಯಿಂದ ಶ್ರೀರಂಗಪಟ್ಟಣದ ಕೃಷ್ಣರಾಜಸಾಗರ (ಕೆಆರ್ಎಸ್) ಅಣೆಕಟ್ಟೆ ಬಳಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಲಾಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಮುಖ ನಾಯಕರ ವಾಗ್ದಾಳಿಯ ವಿವರ ಹೀಗಿದೆ: ”ಸಚಿವ ಸಂಪುಟವೇ ಮುಖ್ಯವಾಗಿದೆ” — ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ”ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಕೆ.ಆರ್.ಪೇಟೆ: ತಾಲೂಕು ಕಚೇರಿಗೆ ಆಗಮಿಸಿದ್ದ ವೃದ್ಧ ರೈತ ಅಣ್ಣಯ್ಯ ಎಂಬುವವರನ್ನು ಸಾರ್ವಜನಿಕವಾಗಿ ಏಕವಚನದಲ್ಲಿ ನಿಂದಿಸಿ, ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೆ.ಆರ್.ಪೇಟೆ ತಹಶೀಲ್ದಾರ್ ಶ್ರೇಯಸ್ ಅವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಕರವೇ ಜಿಲ್ಲಾಧ್ಯಕ್ಷ ಡಿ.ಎಸ್.ವೇಣು ಅವರ ನೇತೃತ್ವದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ಶ್ರೇಯಸ್ ಅವರ ರೈತ ವಿರೋಧಿ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಯಿತು. ”ರೈತರ ಸಮಸ್ಯೆ ಆಲಿಸಿ ಪರಿಹರಿಸಬೇಕಾದ ಅಧಿಕಾರಿ, ದೊರೆಯಂತೆ ವರ್ತಿಸುತ್ತಿರುವುದು…