Police Roundup

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ಸ್ಪರ್ಶಿಸಿ 6ನೇ ತರಗತಿ ವಿದ್ಯಾರ್ಥಿ ದಾರುಣ ಸಾವು

Share News

ಪಿರಿಯಾಪಟ್ಟಣ: ಕ್ರಿಕೆಟ್ ಆಡುತ್ತಿದ್ದ ವೇಳೆ ವಿದ್ಯುತ್ ಕೇಬಲ್ ತಗುಲಿ ಬಾಲಕನೊಬ್ಬ ಸಾವನ್ನಪ್ಪಿದ ಘಟನೆ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.

 

ಗ್ರಾಮದ ನಿವಾಸಿ ಧನಂಜಯ (12) ಮೃತಪಟ್ಟ ದುರದೃಷ್ಟಕರ ಬಾಲಕ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ರಜೆಯ ದಿನವಾದ್ದರಿಂದ ತನ್ನ ಸ್ನೇಹಿತರೊಂದಿಗೆ ಗ್ರಾಮದ ಬಯಲು ಪ್ರದೇಶದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಈ ಅವಘಡ ಸಂಭವಿಸಿದೆ.

 

ಆಟದ ಮಧ್ಯೆ ಕ್ರಿಕೆಟ್ ಬಾಲ್ ಹಾರಿ ಹೋಗಿ ಸಮೀಪದಲ್ಲಿದ್ದ ವಿದ್ಯುತ್ ತಂತಿಗಳ ಮೇಲೆ ಬಿದ್ದಿದೆ. ತಂತಿಯ ಮೇಲೆ ಸಿಲುಕಿದ್ದ ಚೆಂಡನ್ನು ತೆಗೆಯಲು ಪ್ರಯತ್ನಿಸಿದ ಧನಂಜಯನಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಿದ್ಯುತ್ ಪ್ರವಾಹದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ತಕ್ಷಣವೇ ಆತನನ್ನು ರಕ್ಷಿಸಲು ಪ್ರಯತ್ನಿಸಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

 

ಆಟವಾಡುತ್ತಾ ಲವಲವಿಕೆಯಿಂದಿದ್ದ ಬಾಲಕ ಕಣ್ಣೆದುರೇ ಶವವಾಗಿ ಬಿದ್ದಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬಿಟಿಎಂ ಕೊಪ್ಪಲು ಗ್ರಾಮದಲ್ಲಿ ಮೌನ ಆವರಿಸಿದ್ದು, ಗ್ರಾಮಸ್ಥರು ವಿದ್ಯುತ್ ತಂತಿಗಳ ಸುರಕ್ಷತೆಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

​ಘಟನೆಗೆ ಸಂಬಂಧಿಸಿದಂತೆ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Share News

Police Roundup Desk

ತ್ಯಾಗರಾಜ್ ವಿ ಎಸ್, (ಕಳೆದ 27 ವರ್ಷಗಳಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಸುದ್ದಿವಾಹಿನಿಗಳಲ್ಲಿ Investigative Journalist ಆಗಿ ಸೇವೆ ಸಲ್ಲಿಸಿದ ಅನುಭವ.) ಪ್ರಧಾನ ಸಂಪಾದಕರು, ಪೊಲೀಸ್ ರೌಂಡಪ್ News

Leave a Reply

Your email address will not be published. Required fields are marked *

Solverwp- WordPress Theme and Plugin